ಸಮಾ ರಂಭವನ್ನು ಉದ್ಘಾಟಿಸಿ ಮಾತನಾಡಿದ ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಸಂತೋಷ್ ಕುಮಾರ್ ಭಂಡಾರಿ ಅವರು, ಮಹಿಳೆಯರಿಗೆ ಶೇ.33 ಮೀಸಲಾತಿ ನೀಡುವ ಮಸೂದೆ ಮಂಜೂರಾತಿ ಹಂತಕ್ಕೆ ತಲುಪಿರುವುದಕ್ಕೆ ಸಂತಸ ವ್ಯಕ್ತಪಡಿಸಿದರು. ಮಹಿಳೆಯರು ಸ್ವ ಉದ್ಯೋಗದಡಿ ತಯಾರಿಸಿದ ಉತ್ಪನ್ನಗಳ ವಸ್ತುಪ್ರದರ್ಶನವನ್ನು ಉದ್ಘಾಟಿಸಿದರು. ದ.ಕ.ಜಿ.ಪಂ.ನ ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿಸಮಿತಿ ಅಧ್ಯಕ್ಷರಾದ ರಾಜಶ್ರೀ ಹೆಗಡೆ ಅವರು ಡಾ.ರತಿದೇವಿ ಬರೆದ ಗರ್ಭಕೋಶ ದ್ವಾರದ ಕ್ಯಾನ್ಸರ್ ಮತ್ತು ತಡೆಹಿಡಿಯುವ ಹೊಸ ವಿಧಾನಗಳು ಪುಸ್ತಕವನ್ನು ಬಿಡುಗಡೆ ಮಾಡಿದರು.ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ ವಿಜೇತ ಲೋಕೇಶ್ವರಿ ವಿನಯಚಂದ್ರ ಹಾಗೂ ರಾಷ್ಟ್ರ ಪ್ರಶಸ್ತಿ ವಿಜೇತ ಅಂಗನವಾಡಿ ಕಾರ್ಯಕರ್ತೆ ಜಯಲಕ್ಷ್ಮೀ ಬಿ. ಆರ್ ಅವರನ್ನು ಸನ್ಮಾನಿಸಲಾಯಿತು. ಪ್ರತಿಭಾವಂತ ಮಕ್ಕಳಿಗೆ ಜಿಲ್ಲಾ ಮಟ್ಟದ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಅಧ್ಯಕ್ಷ ಪ್ರದೀಪ್ ಕುಮಾರ್ ಕಲ್ಕೂರ, ಜಿಲ್ಲಾ ಮಹಿಳಾ ಮಂಡಲಗಳ ಒಕ್ಕೂಟದ ಅಧ್ಯಕ್ಷೆ ಪ್ರೇಮಲತಾ ರಾವ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಅಧಿಕಾರಿ ಗ್ರೇಸಿ ಗೋನ್ಸಾಲಿಸ್ ಮುಖ್ಯ ಅತಿಥಿಯಾಗಿದ್ದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರಾದ ಶಕುಂತಳಾ ಸ್ವಾಗತಿಸಿದರು.ಮಹಿಳಾ ದಿನಾಚರಣೆ ಅಂಗವಾಗಿ ರಂಗೋಲಿ, ಹೂ ಜೋಡಣೆ ಸ್ಪರ್ಧೆ, ಉಪನ್ಯಾಸ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಮಂಗಳೂರು: ಮಹಿಳೆಯರ ಅಭಿವೃದ್ದಿಗೆ ಹಲವು ಯೋಜನೆಗಳು : ಶಾಸಕ ಯೋಗೀಶ್ ಭಟ್
ಮಂಗಳೂರು,ಮಾರ್ಚ್ 8: ಪ್ರಸಕ್ತ ಸಾಲಿನ ಮುಂಗಡ ಪತ್ರದಲ್ಲಿ ಅಂಗನವಾಡಿ ಶಿಕ್ಷಕಿಯರಿಗೆ ಮತ್ತು ಸಹಾಯಕಿಯರಿಗೆ ಜಾರಿಗೆ ತಂದಿರುವ ಪಿಂಚಣಿ ಯೋಜನೆಯಡಿ ಉದ್ದೇಶಿತ ಮೊತ್ತವನ್ನು ಹೆಚ್ಚಿಸುವಂತೆ ಮುಖ್ಯಮಂತ್ರಿಯವರಲ್ಲಿ ಆಗ್ರಹಿಸುವುದಾಗಿ ಶಾಸಕ ಹಾಗೂ ರಾಜ್ಯ ಕೈಗಾರಿಕಾ ಹಾಗೂ ಬಂಡವಾಳ ಹೂಡಿಕೆ ಅಭಿವೃದ್ಧಿ ನಿಗಮದ ಅಧ್ಯಕ್ಷ ಎನ್. ಯೋಗೀಶ್ ಭಟ್ ಅವರು ಹೇಳಿದರು.
ಸಮಾ ರಂಭವನ್ನು ಉದ್ಘಾಟಿಸಿ ಮಾತನಾಡಿದ ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಸಂತೋಷ್ ಕುಮಾರ್ ಭಂಡಾರಿ ಅವರು, ಮಹಿಳೆಯರಿಗೆ ಶೇ.33 ಮೀಸಲಾತಿ ನೀಡುವ ಮಸೂದೆ ಮಂಜೂರಾತಿ ಹಂತಕ್ಕೆ ತಲುಪಿರುವುದಕ್ಕೆ ಸಂತಸ ವ್ಯಕ್ತಪಡಿಸಿದರು. ಮಹಿಳೆಯರು ಸ್ವ ಉದ್ಯೋಗದಡಿ ತಯಾರಿಸಿದ ಉತ್ಪನ್ನಗಳ ವಸ್ತುಪ್ರದರ್ಶನವನ್ನು ಉದ್ಘಾಟಿಸಿದರು. ದ.ಕ.ಜಿ.ಪಂ.ನ ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿಸಮಿತಿ ಅಧ್ಯಕ್ಷರಾದ ರಾಜಶ್ರೀ ಹೆಗಡೆ ಅವರು ಡಾ.ರತಿದೇವಿ ಬರೆದ ಗರ್ಭಕೋಶ ದ್ವಾರದ ಕ್ಯಾನ್ಸರ್ ಮತ್ತು ತಡೆಹಿಡಿಯುವ ಹೊಸ ವಿಧಾನಗಳು ಪುಸ್ತಕವನ್ನು ಬಿಡುಗಡೆ ಮಾಡಿದರು.ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ ವಿಜೇತ ಲೋಕೇಶ್ವರಿ ವಿನಯಚಂದ್ರ ಹಾಗೂ ರಾಷ್ಟ್ರ ಪ್ರಶಸ್ತಿ ವಿಜೇತ ಅಂಗನವಾಡಿ ಕಾರ್ಯಕರ್ತೆ ಜಯಲಕ್ಷ್ಮೀ ಬಿ. ಆರ್ ಅವರನ್ನು ಸನ್ಮಾನಿಸಲಾಯಿತು. ಪ್ರತಿಭಾವಂತ ಮಕ್ಕಳಿಗೆ ಜಿಲ್ಲಾ ಮಟ್ಟದ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಅಧ್ಯಕ್ಷ ಪ್ರದೀಪ್ ಕುಮಾರ್ ಕಲ್ಕೂರ, ಜಿಲ್ಲಾ ಮಹಿಳಾ ಮಂಡಲಗಳ ಒಕ್ಕೂಟದ ಅಧ್ಯಕ್ಷೆ ಪ್ರೇಮಲತಾ ರಾವ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಅಧಿಕಾರಿ ಗ್ರೇಸಿ ಗೋನ್ಸಾಲಿಸ್ ಮುಖ್ಯ ಅತಿಥಿಯಾಗಿದ್ದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರಾದ ಶಕುಂತಳಾ ಸ್ವಾಗತಿಸಿದರು.ಮಹಿಳಾ ದಿನಾಚರಣೆ ಅಂಗವಾಗಿ ರಂಗೋಲಿ, ಹೂ ಜೋಡಣೆ ಸ್ಪರ್ಧೆ, ಉಪನ್ಯಾಸ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲಾಗಿತ್ತು.
Rate this article





del.icio.us
Digg
Comments (0 posted):
Post your comment